ಮಳೆ ನಿಂತು ಹೋದ ಮೇಲೆ
ಮಿಲನ ಶ್ರೇಯಾ ಗೋಶಾಲ್
ಜಯಂತ್ ಕಾಯ್ಕಿಣಿ
ಮನೋ ಮೂರ್ತಿ
ಮಳೆ ನಿಂತು ಹೋದಮೇಲೆ ಹನಿಯೊಂದು ಮೂಡಿದೆ
ಮಾತೆಲ್ಲ ಮುಗಿದ ಮೇಲೆ ಧ್ವನಿಯೊಂದು ಕಾಡಿದೆ
ಹೇಳುವುದು ಏನೋ ಉಳಿದು ಹೋಗಿದೆ
ಹೇಳಲಿ ಹೇಗೆ ತಿಳಿಯದಾಗಿದೆ || ಪ ||
ನೋವಿನಲ್ಲಿ ಜೀವ ಜೀವ ಅರಿತ ನಂತರ
ನಲಿವು ಬೇರೆ ಏನಿದೆ ಏಕೀ ಅಂತರ
ನಿನ್ನ ಹಾಡಿನಲ್ಲಿ ಇಂದು ಬೆರೆವ ಕಾತರ
ಒಂದೇ ಸಾರಿ ನೀ ಕೇಳೆಯಾ ಈ ಸ್ವರ
ಮನಸಲ್ಲಿ ಚೂರು ಜಾಗ ಬೇಕಿದೆ
ಕೇಳಲಿ ಹೇಗೆ ತಿಳಿಯದಾಗಿದೆ ||
ಕಣ್ಣು ತೆರೆದು ಕಾಣುವ ಕನಸೇ ಜೀವನ
ಸಣ್ಣ ಹಠವ ಮಾಡಿದೆ ಹೃದಯ ಈ ದಿನ
ಎದೆಯ ದೂರವಾಣಿಯ ಕರೆಯ ರಿಂಗಣ
ಕೇಳು ಜೀವವೇ ಏತಕೀ ಕಂಪನ
ಹೃದಯವು ಇಲ್ಲಿ ಕಳೆದುಹೋಗಿದೆ
ಹುಡುಕಲೇ ಬೇಕೆ ತಿಳಿಯದಾಗಿದೆ ||
ಮಿಲನ
ಚಿತ್ರ ನೋಡಿ