ಎಸ್. ನಿಜಲಿಂಗಪ್ಪ

S. Nijalingappa

ಕರ್ನಾಟಕ ಏಕೀಕರಣದಲ್ಲಿ ಮಹತ್ವದ ಪಾತ್ರವಹಿಸಿ, ಅದರ ಯಶಸ್ಸಿಗೆ ಶಕ್ತಿಮೀರಿ ದುಡಿದ ಎಸ್. ನಿಜಲಿಂಗಪ್ಪನವರು, ಕರ್ನಾಟಕದ ಮೊದಲ ಮುಖ್ಯಮಂತ್ರಿಯಾಗಿ ಹಾಗೂ ಇನ್ನಿತರ ರಾಜಕೀಯ ಹುದ್ದೆಗಳಲ್ಲಿ ಯಶಸ್ಸನ್ನು ಗಳಿಸಿದವರು.

1902ರಲ್ಲಿ ಕೃಷಿ ಪ್ರಧಾನವಾದ ಬಡ ಕುಟುಂಬವೊಂದರಲ್ಲಿ ಜನಿಸಿದ ನಿಜಲಿಂಗಪ್ಪ, ತಮ್ಮ ಬದುಕಿನ ಕೊನೆಯ ದಿನಗಳವರೆಗೂ ಸ್ಪಂದಿಸಿದ್ದು ಜನಸಾಮಾನ್ಯರ ಕಷ್ಟ ಸುಖಗಳಿಗೆ.

ಸ್ವಾತಂತ್ರ್ಯ ಪೂರ್ವದಲ್ಲಿ ಗಾಂಧೀವಾದದ ದೀಕ್ಷೆ ಕೈಗೊಂಡು ಬದುಕಿನುದ್ದಕ್ಕೂ ಅದನ್ನು ಪಾಲಿಸಿಕೊಂಡು ಬಂದ ನಿಜಲಿಂಗಪ್ಪನವರ ನಡೆ-ನುಡಿಗಳ ನಡುವೆ ಎಂದೂ ಅಂತರವಿರಲಿಲ್ಲ.

ನಿಜಲಿಂಗಪ್ಪನವರು ತೆರಿಗೆದಾರರ ಹಣ ಅವರ ಅಭ್ಯುದಯಕ್ಕೆ ಹೊರತು, ಅವರೇ ಆರಿಸಿ ಕಳುಹಿಸಿದ ಜನಪ್ರತಿನಿಧಿಗಳಿಗಲ್ಲ ಎಂಬ ನಿಲುವುವಿನಲ್ಲಿ ಅಚಲ ವಿಶ್ವಾಸವಿರಿಸಿಕೊಂಡಿದ್ದರು. ಎರಡು ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ನಿಜಲಿಂಗಪ್ಪನವರು, ಸ್ವಂತಕ್ಕಾಗಿ ಅಧಿಕಾರವನ್ನು ಬಳಸಲಿಲ್ಲ.

ಕರ್ನಾಟಕದ ಏಕೀಕರಣ ಮತ್ತು ಅಭಿವೃದ್ಧಿಗಾಗಿ ದುಡಿದ ನಿಜಲಿಂಗಪ್ಪನವರಿಗೆ 1999 ರಲ್ಲಿ ಕರ್ನಾಟಕ ಸರ್ಕಾರವು 'ಕರ್ನಾಟಕ ರತ್ನ' ಪ್ರಶಸ್ತಿ ನೀಡಿ ಗೌರವಿಸಿದೆ.

ಕರ್ನಾಟಕದ ಏಕೀಕರಣ, ಶರಾವತಿ ಜನವಿದ್ಯುತ್ ಯೋಜನೆ, ಕೃಷ್ಣಾ ಮೇಲ್ಡಂಡೆ ಯೋಜನೆಗಳು ಹೀಗೆ ಹಲವಾರು ಯೋಜನೆಗಳು ನಿಜಲಿಂಗಪ್ಪನವರ ನೆನಪು ನಾಡಿನ ಜನಮನದಲ್ಲಿ ಹಚ್ಚ ಹಸಿರಾಗಿ ಇಡಬಲ್ಲವು.

ನಿಜಲಿಂಗಪ್ಪನವರ ಮತ್ತೊಂದು ಪ್ರಮುಖವಾದ ಕೆಲಸವೆಂದರೆ, ಟಿಬೇಟ್ ಸಮುದಾಯದವರಿಗೆ ಕರ್ನಾಟಕದಲ್ಲಿ ಆಶ್ರಯ ಒದಗಿಸಿದ್ದು. ಕರ್ನಾಟಕದಲ್ಲಿನ ಟಿಬೇಟಿಯನ್ನರು ಮನಗಳಲ್ಲಿ ನಿಜಲಿಂಗಪ್ಪನವರು ಸದಾ ನೆಲೆಸಿರುತ್ತಾರೆ. ಈ ಕಾರಣಕ್ಕಾಗಿಯೇ, ಚಿತ್ರಗುರ್ಗದಲ್ಲಿನ ಅವರ ಸ್ಮಾರಕವನ್ನು 'ದಲಾಯಿ ಲಾಮ'ರವರು ಉದ್ಘಾಟಿಸಿದರು.

ಸಂಕ್ಷಿಪ್ತ ಪರಿಚಯ

ನಾಮಧೇಯ ಸಿದ್ದವನಹಳ್ಳಿ ನಿಜಲಿಂಗಪ್ಪ
ಜನನ 1902 ಡಿಸೆಂಬರ್ 10
ಮರಣ 2000 ಆಗಸ್ಟ್ 8
ತಂದೆ ಅಡಿವಪ್ಪ
ತಾಯಿ ಮರಿಗಮ್ಮ
ಜನ್ಮ ಸ್ಥಳ ಹಲುವಾಗಲು ಗ್ರಾಮ, ಹರಪನಹಳ್ಳಿ ತಾಲ್ಲೂಕು, ಬಳ್ಳಾರಿ ಜಿಲ್ಲೆ.

ಅಧಿಕಾರ/ಹುದ್ದೆ

ಕ್ರ. ಸಂ. ಅಧಿಕಾರ/ಹುದ್ದೆ ಅವಧಿ
1. ಮೈಸೂರು ವಿಧಾನ ಪರಿಷತ್ತು 1937 - 1938
2. ಅಧ್ಯಕ್ಷರು, ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ 1936 - 1940
3. ಸದಸ್ಯರು, ಮೈಸೂರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ 1938 - 1950
4. ಪ್ರಧಾನ ಕಾರ್ಯದರ್ಶಿ, ಮೈಸೂರು ಪ್ರದೇಶ ಕಾಂಗ್ರೆಸ್ ಸಮಿತಿ 1942 - 1945
5. ಅಧ್ಯಕ್ಷರು, ಮೈಸೂರು ಪ್ರದೇಶ ಕಾಂಗ್ರೆಸ್ ಸಮಿತಿ 1945 - 1946
6. ಅಧ್ಯಕ್ಷರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ 1946
7. ಸದಸ್ಯರು, ಭಾರತದ ಸಂವಿಧಾನ ಸಭೆ ಮತ್ತು ತಾತ್ಕಾಲಿಕ ಸಂಸತ್ತು 1946
8. ಸದಸ್ಯರು ಮತ್ತು ಅಧ್ಯಕ್ಷರು, ಮೈಸೂರು ಸಂವಿಧಾನ ಸಭೆ 1948 - 1950
9. ಸದಸ್ಯರು, ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ 1949
10. ಸದಸ್ಯರು, ಗೋಪಾಲ್ ರಾವ್ ವಿಚಾರಣಾ ಸಮಿತಿ, ಮೈಸೂರು ಸರ್ಕಾರ
11. ಅಧ್ಯಕ್ಷರು, ಇಂಡಿಯನ್ ಆಯಿಲ್ ಸಂಸ್ಥೆ 1959 - 1962
12. ಅಧ್ಯಕ್ಷರು, ಅಖಿಲ ಭಾರತ ಕಾಂಗ್ರೆಸ್ 1968
13. ಮುಖ್ಯಮಂತ್ರಿಗಳು, ಕರ್ನಾಟಕ ರಾಜ್ಯ 1956 - 1958
14. ಮುಖ್ಯಮಂತ್ರಿಗಳು, ಕರ್ನಾಟಕ ರಾಜ್ಯ 1962 - 1968
14. ಸದಸ್ಯರು, ಚಿತ್ರದುರ್ಗ ಕ್ಲಬ್ 1929
15. ಕಾರ್ಯದರ್ಶಿ, ಚಿತ್ರದುರ್ಗ ಕ್ಲಬ್ 1935 - 1937
16. ಸದಸ್ಯ, ಸಂವಿಧಾನ ಕ್ಲಬ್, ನವದೆಹಲಿ.